ಡಿ.9 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪೂರ್ಣ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ.
ಬೆಳಗಾವಿ : ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲದ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಉಟೋಪಹಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೋಡಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಂಭಾಂಗಣದಲ್ಲಿ ಬುಧವಾರ ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ -2024 ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು..

ಈ ಬಾರಿಯ ಚಳಗಾಲದ ಅಧಿವೇಶನ ಸಿದ್ದತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.
ಅಧಿವೇಶನ ಯಶಸ್ವಿಗಾಗಿ ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣಾ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಗೆ ವಹಿಸಬೇಕು ಎಂದು ತಿಳಿಸಿದರು.
ಅಧಿವೇಶನಕ್ಕೆ ಆಗಮಿಸುವ ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು.
ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.
ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಅಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಷನ್ ಅವರು ಸೂಚನೆ ನೀಡಿದರು.
ಸಭೆಯಲ್ಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಪಾಲಿಕೆ ಆಯುಕ್ತೆ ಶುಬಾ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾದರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ ಸೇರಿದಂತೆ ಹಲವು ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.