ಡಿ.26 ರಂದು ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಸಿ.ಎಂ.ಸಿದ್ದರಾಮಯ್ಯ ಅವರಿಂದ ಉದ್ಘಾಟನೆ
ಬೆಳಗಾವಿ : ಕರ್ನಾಟಕ ಸರ್ಕಾರ ,ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ , ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಡಿಸೆಂಬರ್ 26, 2024 ರಂದು ಮುಂಜನೆ 10.30 ಕ್ಕೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ( ಮಹಿಳಾ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ), ಖಾದಿ ಉತ್ಸವ , ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಬೆಳಗಾವಿಯ ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ಉದ್ಘಾಟನೆಯಾಗಲಿದೆ.
ಮೂರು ದಿನಗಳ ಕಾಲ ನಡೆಯುವ ಈ ಮೇಳವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ, ಲೋಕೊಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ , ವೈದ್ಯಕೀಯ ಸಚಿವರಾದ ಶರಣಪ್ರಕಾಶ ಪಾಟೀಲ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಶಾಸಕರಾದ ಆಶೀಫ್ ( ರಾಜು) ಸೇಠ ವಹಿಸಲಿದ್ದಾರೆ.